ಆಡಳಿತ ಪಕ್ಷಕ್ಕೆ ಆಕ್ರೋಶ, ಹತಾಶೆ, ಆತಂಕ, ಅನುಕಂಪ ಇರಬೇಕು, ತಪ್ಪಲ್ಲ. ಆದರೆ, ಹೊಟ್ಟೆಯಲ್ಲಿರುವ ಅಸಹ್ಯವನ್ನೆಲ್ಲ ಬಾಯಲ್ಲಿ ಕಾರಿಕೊಳ್ಳುವ ವಿಕೃತಿ ಮಾತ್ರ ಇರಲೇಬಾರದು. ಹೀಗಂತ ಹೇಳಲು ನಾವು ಗಂಭೀರವಾಗಿ ವಿಷಾದಿಸುತ್ತೇವೆ. * ನಾಮ ಹಾಕುವುದರಲ್ಲಿ @INCKarnataka ಪರಮ ನಿಸ್ಸೀಮ; ಅದಕ್ಕೆ ಸಾವಿರದೆಂಟು ಉದಾಹರಣೆ ಕೊಡಬಹುದು. ಈಗ ಹೇಳಿ; ಕೊಳಕುಮಂಡಲ ಯಾವುದು? ಅದೇ ಕಾಂಗ್ರೆಸ್ ಅಲಿಯಾಸ್ ಕೊಳಕುಗ್ರೆಸ್!! * ಒಂದೆಡೆ ಆದಾಯ ತೆರಿಗೆಯವರಿಗೆ #SST, #YST ಬಾಬ್ತುಗಳ ಕಂತೆ ಕಂತೆ ಹಣ ಸಿಕ್ಕಿದೆ. ಸಿಎಂ, ಡಿಸಿಎಂ ಪಟಾಲಂ ಪರಿಶ್ರಮದಿಂದ ಬಾಚಿದ್ದ ಪಾಪದ ಹಣ ಕೈ ತಪ್ಪಿದೆ. ಐಟಿ, ಈಡಿ ಕುಣಿಕೆ ಯಾರಿಗೆಲ್ಲ ಬಿಗಿದುಕೊಳ್ಳಲಿದೆಯೋ ಗೊತ್ತಿಲ್ಲ. ಸಾಹುಕಾರ ಸಿವಕುಮಾರ ಸುಲ್ತಾನನಿಗೂ ಸಿಬಿಐ ಸಿಕ್ಕು ಬಿದ್ದಿದೆ. ಇದೆಲ್ಲಾ ಹೋಗಲಿ ಎಂದರೆ, @INCKarnataka ಸರಕಾರಕ್ಕೆ 5 ತಿಂಗಳು ತುಂಬುವ ಮೊದಲೇ ಬೆಳಗಾವಿ ಜ್ವಾಲೆ ಭುಗಿಲೆದ್ದಿದೆ. ಅಂತಃಪುರದ ಕಲಹ ಹಾದಿಬೀದಿಗಳಲ್ಲಿ ಮೂರು ಕಾಸಿಗೆ ಬಿಕರಿಯಾಗುತ್ತಿದೆ. ಇನ್ನು ಕಕ್ಕಿಕೊಳ್ಳುವುದು ಬಿಟ್ಟರೆ ಇನ್ನೇನಿದೆ? * ಕಾಂಗ್ರೆಸ್ ವಕ್ರರೇಖೆಗಳ ಹೊಲಸುಗುಚ್ಛ!! ಅಷ್ಟಾವಕ್ರನ ಅಪರಾವತಾರಿ. ನಾಮ, ಪಂಗನಾಮ, ಉಂಡೆನಾಮಗಳೆಲ್ಲ ಅದರ ಆಜನ್ಮ ಆಸ್ತಿ. ಕೊಳಕು, ಹುಳಕು, ಥಳುಕು ಅದರ ಪೇಟೆಂಟು. ಭಾರತೀಯ ಅಸ್ಮಿತೆಯ ನೈಜ ಶತ್ರು, ದೇಶದ್ರೋಹಿಗಳ ಆಪ್ತಬಂಧು, ಹಸ್ತಿನಾವತಿಯಲ್ಲೇ ಅಡ್ರಸ್ಸಿಲ್ಲದ ಪಕ್ಷ, ಕರ್ನಾಟಕ ಜೋಡೋ ಬದಲು ಕಾವೇರಿ ತೋಡೋ ಎನ್ನುತ್ತಿದೆ. * ಅನುಮಾನವೇಕೆ? ಕೊಳಕು ಮಂಡಲ, ಬಚ್ಚಲು ಬಾಯಿ ಎಂದರೆ ಅದು ಕಾಂಗ್ರೆಸ್ಸೇ.. ಈಗ ನಾಲಿಗೆ.. ನಾಲಿಗೆ ಎನ್ನುತ್ತಿದೆ, ಛೀ.. ಹೇಸಿಗೆ. ಕಾಂಗ್ರೆಸ್ ನಾಲಿಗೆ ಗಬ್ಬೆದ್ದು ಬಹಳ ವರ್ಷವೇ ಆಗಿದೆ. ಜಾತ್ಯತೀತತೆ ಎನ್ನುವುದು ಆ ಕೊಳಕು ಪಕ್ಷದ ಥಳುಕು ಬಳಕಷ್ಟೇ. ಗೆಲ್ಲುವ ತನಕ ಜಾತ್ಯತೀತ, ಗೆದ್ದ ಮೇಲೆ ಜಾತಿಗಣಿತ! ಇದೇ ಅದರ ಮತ ಗಳಿಕೆಯ ಮೂಲ ಬಂಡವಾಳ. ತನ್ನ ಮುಖವನ್ನು ಕನ್ನಡಿಯಲ್ಲೂ ನೋಡಿಕೊಳ್ಳಲಾಗದ ದೈನೇಸಿ ಡರ್ಟಿಪಾರ್ಟಿ, ಪರರ ಹಂಗಿನಲ್ಲಿಯೆ ಬದುಕುವ ಪರಾವಲಂಬಿ! * ಸರಕಾರಗಳನ್ನು ಕೊಲ್ಲುವ, ಹೆಗಲು ಕೊಟ್ಟವರನ್ನೇ ಮೇಲೆತ್ತಿದ ಪಕ್ಷಗಳನ್ನೇ ಕೊಳಕುಮಂಡಲದಂತೆ ಕಚ್ಚುವ ಕೈ ಪಕ್ಷ ರಾಮಾಯಣ, ಮಹಾಭಾರತದಿಂದ ಎರವಲು ಪಡೆದದ್ದೇ ಅದೇ ಮಂಥರೆ, ಶಕುನಿಯ ಕುತಂತ್ರವನ್ನೇ. ಆಶ್ರಯ, ಅನ್ನ ಕೊಟ್ಟ ಪಕ್ಷಕ್ಕೇ ಕನ್ನ ಕೊರೆಯುವ, ಉಂಡ ಮನೆಗೇ ಎರಡನ್ನು ಬಗೆಯುವ ಮೀರ್ʼಸಾದಿಕರ ಆಡಂಬೋಲವೇ ಕಾಂಗ್ರೆಸ್. 75 ವರ್ಷದ ಈ ಪರದೇಸಿ ಪಕ್ಷದ್ದು ಸಮಾಜವಾದ, ಸಮತಾವಾದ, ಪ್ರಜಾಪ್ರಭುತ್ವವಾದ ಅಲ್ಲ, ಅದರದ್ದೇನಿದ್ದರೂ 'ಮೀರುಸಾದಿಕವಾದ!'; ಆ ಹಸ್ತವಾಸಿ ಲೋಕವಿಖ್ಯಾತಿ. * ಕಾಂಗ್ರೆಸ್ ತನಗಿರುವ ಬಿರುದು ಬಾವಲಿಗಳನ್ನು ಇನ್ನೊಬ್ಬರ ಹಣೆಗೆ ಕಟ್ಟುವ ಕೀಳು ಕಸುಬಿಗೆ ಕೈ ಹಾಕಿದೆ. ಗೋಮುಖವ್ಯಾಘ್ರವೇ ಈಗ ಕುಮಾರಸ್ವಾಮಿ ಅವರನ್ನು ಗೋಸುಂಬೆ ಎಂದು ನಿಂದಿಸುತ್ತಿದೆ. ಅಕ್ರಮ, ಅವ್ಯವಹಾರ, ಅನಾಚಾರ.. ಅಷ್ಟೇ ಅಲ್ಲ, ವಾಮಾಚಾರದ ವೀರನೇ ರಾಜ್ಯ ಕಾಂಗ್ರೆಸ್ ಸಾರಥಿ. * ಜಾತ್ಯತೀತತೆ ತನ್ನದೇ ಗುತ್ತಿಗೆ ಎಂದು ಕರ್ಣಕಠೋರ ಸುಳ್ಳು ಹೇಳುತ್ತಾ ಅದನ್ನು ಬಿಹಾರದ ನಿತೀಶ್ ಕುಮಾರ್ ಅವರ ಮನೆ ಹಿತ್ತಲಲ್ಲಿ ಹೂತು ಸಮಾಧಿ ಮಾಡಿದೆ ಕಾಂಗ್ರೆಸ್. ಈಗ ಜಾತಿ-ಜಾತಿ ಎನ್ನುತ್ತಾ ಜಾತಿಗಣಿತ ಎಂಬ ಅಪಾಯಕಾರಿ ಆಟ ಆರಂಭಿಸಿ ಚುನಾವಣೆಗೆ ಮುನ್ನವೇ ಟೂಲ್ ಕಿಟ್ ರೆಡಿ ಮಾಡಿಟ್ಟಿದೆ. ಈ ದುಷ್ಟ ಟೂಲುಕಿಟ್ಟಿನ ಕಿರಾತಕ ಕಾರ್ಯಾಗಾರ ಇಟಲಿಯಲ್ಲಿದೆಯೋ ಅಥವಾ ಲುಲೂ ಮಾಲಿನ ಮೇಲಿದೆಯೋ? * ರಾಜ್ಯವನ್ನು ತುಷ್ಟೀಕರಣದ ಬಿಸಿತುಪ್ಪದಲ್ಲಿ ಬೇಯಿಸಲು ನಡೆಯುತ್ತಿರುವ ಟೂಲ್ ಕಿಟ್ ಕಾರ್ಯಾಗಾರದಲ್ಲಿ ಕೋಮು ಕುಂಡ ಸಿದ್ಧಪಡಿಸಿದೆ ಕೈ ಪಕ್ಷ. ಶಿವಮೊಗ್ಗದಲ್ಲಿ ನಡೆದಿದ್ದು ಅದರ ಸ್ಯಾಂಪಲ್ಲಾ? ಅದನ್ನು ರಾಜ್ಯವ್ಯಾಪಿ ವಿಸ್ತರಿಸಲು ಹುನ್ನಾರವಾ? * ಕುಮಾರಸ್ವಾಮಿ ಅವರನ್ನು ವಚನ ಭ್ರಷ್ಟರು ಎನ್ನುತ್ತೀರಿ. ಮೈತ್ರಿ ಸರಕಾರ ತೆಗೆದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೇ ಒಳಏಟು ಕೊಟ್ಟ ಸಿದ್ದಪುರುಷರನ್ನೇ ಸಿಎಂ ಮಾಡಿಕೊಂಡಿದ್ದೀರಿ. ಸಿಗ್ಗು, ಲಜ್ಜೆ ಇಲ್ಲವೇ? ಪಕ್ಷ ವಿರೋಧಿಗೇ ಪಟ್ಟ ಕಟ್ಟಿ, ಪಕ್ಷದ ಚಟ್ಟ ಎತ್ತಿದ ಈ ರಾಜಕಾರಣಕ್ಕೆ ಏನೆಂದು ಹೇಳಬೇಕು? * ಕಾಂಗ್ರೆಸ್ ಕಳ್ಳಸುಳ್ಳಿನ ಫ್ಯಾಕ್ಟರಿ. ಅಪ್ಪಟ ಅಸತ್ಯಗಳ ಅಡ್ಡೆ. ದೇಶದ್ರೋಹಿಗಳ ಪರವಿರುವ ಪಾತಕ ಪಕ್ಷ. ಒಂದು ಸಮುದಾಯದ ತುಷ್ಠೀಕರಣದ ನಗದೀಕರಣವೇ ಅದರ ಅರ್ಥಶಾಸ್ತ್ರ. ವಿ.ಪಿ.ಸಿಂಗ್, ಚಂದ್ರಶೇಖರ್, ಹೆಚ್.ಡಿ.ದೇವೇಗೌಡರು, ಐಕೆ ಗುಜ್ರಾಲ್ ಸರಕಾರಗಳನ್ನು ಬಲಿ ಪಡೆದ ಕೊಲೆಗೆಡುಕ ಪಕ್ಷ. ಕೇರಳದ EMS ನಂಬೂದರಿಪಾಡ್ ಅವರ ಸರಕಾರದಿಂದ ಮೊದಲುಗೊಂಡು ಆ ಪಕ್ಷ ನಡೆಸಿದ ರಾಜ್ಯ ಸರಕಾರಗಳ ನರಮೇಧದ ಪಟ್ಟಿಯೇ ಹನುಮನ ಬಾಲದಷ್ಟು. ನಯವಂಚನೆ, ವಿಶ್ವಾಸದ್ರೋಹವೇ ಕಾಂಗ್ರೆಸ್ ಲಾಂಛನ. ಮೈತ್ರಿಯಿಂದ ಮದ್ರಾಸ್ ಐ ಬಂದ ಹಾಗೆ ಪತರಗುಟ್ಟುತ್ತಿದೆ. #ಕಾಲಕ್ಕೆ_ಕಾಂಗ್ರೆಸ್ #Scamgress
@JanataDal_S @INCKarnataka 👌👍 ಭಾರತ ಮಾತೆಗೆ ಮೊದಲ ಶತ್ರು ಅಂದ್ರೇ ಈ ಕಾಂಗ್ರೇಸ್, ತುಂಬಾ ಅಂಟುಜಾಡ್ಯವಾಗಿ ಆವರಿಸಿದೆ, ಇದರ ನಿರ್ಮೂಲನೆಯಾಗದಿದ್ಧರೆ, ವಿಶ್ವದಲ್ಲೇ ಶ್ರೇಷ್ಟ ಸಂಸ್ಕಾರವಂತ ನಾಗರೀಕತೆಯನ್ನೇ ಕಳೆದುಕೊಳ್ಳುತ್ತೇವೆ. ಪ್ರತೀ ನಾಗರಿಕರಿಗೆ ಜಾಗ್ರತೆ ಮೂಡಿಸುವ ಕೆಲಸ ಶೀಘ್ರಪತದಲ್ಲಿ ನಡೆಯಲಿ.